ಮುಂಬಯಿ (ಆರ್ಬಿಐ), ಮೇ.06: ಬಸವಕಲ್ಯಾಣ ಉಪಚುನಾವಣೆಯಲ್ಲಿ ಜಯ ಸಾಧಿಸಿದ ನಂತರ ಮೊದಲ ಬಾರಿಗೆ ಕಲಬುರಗಿಗೆ ಮೇ.5 ರಂದು ಭೇಟಿ ಮಾಡಿದ ಸಂದರ್ಭದಲ್ಲಿ ಶರಣು ಸಲಗರ್ ಅವರಿಗೆ ಮೈಸೂರು ಪೇಟ ತೊಡಿಸಿ ಹಾಗೂ ಕರಾವಳಿಯ ಯಕ್ಷಗಾನದ ಕಿರೀಟ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ದಕ್ಷಿಣ ಕನ್ನಡ ಸಂಘದ ಅಧ್ಯಕ್ಷ ಡಾ| ಸದಾನಂದ ಪೆರ್ಲ, ಕರ್ನಾಟಕ ಹೋಟೆಲ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ಜತ್ತನ್, ಅಸೋಸಿಯೇಷನ್ನ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ನರಸಿಂಹ ಮೆಂಡನ್ ಇದ್ದರು.