Friday 19th, April 2024
canara news

ರಾಜ್ಯಪ್ರಶಸ್ತಿ ಪುರಸ್ಕೃತ ಬಂಡಾಯ ಸಾಹಿತಿ-ಪ್ರಸಿದ್ಧ ಕವಿ ಸಿದ್ದಲಿಂಗಯ್ಯ ವಿಧಿವಶ

Published On : 12 Jun 2021   |  Reported By : Rons Bantwal


ಮುಂಬಯಿ ವಿವಿ ಕನ್ನಡ ವಿಭಾಗ, ಕನ್ನಡಿಗ ಸಂಘ ಸಂಸ್ಥೆಗಳ ಸಂತಾಪ

ಮುಂಬಯಿ (ಆರ್‍ಬಿಐ), ಜೂ.11: ಕರ್ನಾಟಕ ರಾಜ್ಯದ ಖ್ಯಾತ ಬಂಡಾಯ ಸಾಹಿತಿ-ಪ್ರಸಿದ್ಧ ಕವಿ ಸಿದ್ದಲಿಂಗಯ್ಯ (67.) ಇಂದಿಲ್ಲಿ ಬೆಂಗಳೂರುನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊರೋನಾ ಬಾಧಿತರಾಗಿ ವಿಧಿವಶರಾದರು.

ಸಿದ್ಧಲಿಂಗಯ್ಯ ಅವರು ಕರ್ನಾಟಕ ಕನ್ನಡ ಪ್ರಾಧೀಕಾರದ ಅಧ್ಯಕ್ಷ, ಕರ್ನಾಟಕ ಪುಸ್ತಕ ಪ್ರಾಧೀಕಾರದ ಅಧ್ಯಕ್ಷರಾಗಿದ್ದಾಗ ಮಹಾರಾಷ್ಟ್ರ ಮುಂಬಯಿಯ ನಂಟನ್ನಿರಿಸಿ ಆವಾಗಾವಗ ಆಗಮಿಸಿ ವಿವಿಧ ಕಾರ್ಯಕ್ರಮಗ ಳಲ್ಲಿ ಪಾಲ್ಗೊಳ್ಳುತ್ತಿದ್ದರು. 2003ರಲ್ಲಿ ಗೋರೆಗಾಂವ್ ಕರ್ನಾಟಕ ಸಂಘದ ಆರನೇ ವಿಚಾರ ಭಾರತಿ ಸಮ್ಮೇಳನದ ಅಧ್ಯಕ್ಷತೆ, ಹೃದಯವಾಹಿನಿ ಸಂಸ್ಥೆ ಗೋವಾದಲ್ಲಿ ನಡೆಸಿದ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದು, ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು. ಮರಾಠಿ ಸಾಹಿತ್ಯ ಪುರಸ್ಕಾರಕ್ಕೂ ಭಾಜನರಾಗಿದ್ದರು.

ಸಿದ್ಧಲಿಂಗಯ್ಯರ ನಿಧನಕ್ಕೆ ಗೋರೆಗಾಂವ್ ಕರ್ನಾಟಕ ಸಂಘ, ಕರ್ನಾಟಕ ಸಂಘ ಮುಂಬಯಿ, ಕನ್ನಡ ಸಂಘ ಮುಂಬಯಿ, ಹೃದಯವಾಹಿನಿ ಸಂಸ್ಥೆಯ ಇಂ. ಮಂಜುನಾಥ್ ಸಾಗರ್, ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್ ಉಪಾಧ್ಯ, ಡಾ| ಸುನೀತಾ ಎಂ.ಶೆಟ್ಟಿ, ಭಾರತೀಯ ಕೃಷಿ ಸಂಶೋಧನಾ ಪರಿಷತ್ತು (ಐಐಹೆಚ್‍ಆರ್)ನ ಪ್ರಧಾನ ವಿಜ್ಞಾನಿ ಡಾ| ಬಿ.ನಾರಾಯಣಸ್ವಾಮಿ, ಡಾ| ಭರತ್‍ಕುಮಾರ್ ಪೆÇಲಿಪು, ಮುಂಡ್ಕೂರು ಸುರೇಂದ್ರ ಸಾಲ್ಯಾನ್ ಮತ್ತಿತರ ಗಣ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಕವಿ ಸಿದ್ಧಲಿಂಗಯ್ಯ
ಇವರು ಬಡ ಕುಟುಂಬವೊಂದರಲ್ಲಿ ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954 ರ ಫೆಬ್ರವರಿ 3 ರಂದು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಮಂಚನಬೆಲೆಯಲ್ಲಿ ಜನಿಸಿದರು. ಮಾಗಡಿಯ ಹೊಸಹಳ್ಳಿಯ ಬಿಸಿಲಮ್ಮನ ಗುಡಿಯಲ್ಲಿ ಅಕ್ಷರಾಭ್ಯಾಸ ಪ್ರಾರಂಭಿಸಿದ ಸಿದ್ಧಲಿಂಗಯ್ಯನವರು 1974ರ ವರ್ಷದಲ್ಲಿ ಬೆಂಗಳೂರಿನ ಸರಕಾರಿ ಕಲಾಕಾಲೇಜಿನಿಂದ ಬಿಎ ಆನರ್ಸ್ (ಐಚ್ಛಿಕ ಕನ್ನಡ) ಪದವಿಯನ್ನು ಪಡೆದರಲ್ಲದೆ. 1976ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪೆÇ್ರ. ಡಿ.ಎಲ್.ನರಸಿಂಹಾಚಾರ್ಯರ ಸ್ವರ್ಣಪದಕದೊಂದಿಗೆ ಪ್ರಥಮ ಶ್ರೇಣಿಯಲ್ಲಿ ಎಂಎ ಪದವಿಯನ್ನೂ, ಪೆÇ್ರ.ಜಿ.ಎಸ್. ಶಿವರುದ್ರಪ್ಪನವರ ಮಾರ್ಗದರ್ಶನದಲ್ಲಿ `ಗ್ರಾಮದೇವತೆಗಳು' ಎಂಬ ಪ್ರೌಢ ಪ್ರಬಂಧವನ್ನು ಮಂಡಿಸಿ 1989ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‍ಡಿ ಪದವಿ ್ನ ಗಳಿಸಿದವರಾಗಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಸಿದ್ಧಲಿಂಗಯ್ಯನವರು, ಪ್ರಾಧ್ಯಾಪಕರಾಗಿ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ವಿದ್ಯಾಥಿರ್ü ದೆಸೆಯಿಂದಲೇ ಸಮಾಜದಲ್ಲಿನ ಅಸಮಾನತೆಗಳ ಬಗ್ಗೆ ತಮ್ಮೊಳಗೆ ಮೊಳೆಯುತ್ತಿದ್ದ ಸಿಟ್ಟು, ಆಕ್ರೋಶಗಳನ್ನೂ ವ್ಯಕ್ತಿಪಡಿಸಲು ಸಿದ್ಧಲಿಂಗಯ್ಯನವರು ಆಯ್ದುಕೊಂಡದ್ದು ಕಾವ್ಯ ಮಾಧ್ಯಮ. ಹೀಗೆ ಅವರು ಬರೆದ ಹಲವಾರು ಕವನಗಳ ಸಂಕಲನ `ಹೊಲೆಮಾದಿಗರ ಹಾಡು' 1975ರಲ್ಲಿ ಪ್ರಕಟಗೊಂಡಿತು. ಮುಂದೆ ಅವರ `ಸಾವಿರಾರು ನದಿಗಳು', `ಕಪ್ಪುಕಾಡಿನ ಹಾಡು', `ಮೆರವಣಿಗೆ', `ನನ್ನ ಜನಗಳು ಮತ್ತು ಇತರ ಕವಿತೆಗಳು', `ಆಯ್ದ ಕವನಗಳು' ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ.

ಸಿದ್ಧಲಿಂಗಯ್ಯನವರ `ಪಂಚಮ ಮತ್ತು ನೆಲಸಮ', `ಏಕಲವ್ಯ' ಪ್ರಮುಖ ನಾಟಕಗಳಾದರೆ `ಅವತಾರಗಳು' ಪ್ರಬಂಧ ಕೃತಿ. ಇವಲ್ಲದೆ ರಸಗಳಿಗೆಗಳು, ಎಡಬಲ, ಹಕ್ಕಿನೋಟ, ಜನಸಂಸ್ಕೃತಿ, ಉರಿಕಂಡಾಯ ಮುಂತಾದ ಲೇಖನ ಸಂಗ್ರಹಗಳು, ಸದನದಲ್ಲಿ ಸಿದ್ಧಲಿಂಗಯ್ಯ ಭಾಗ 1-2 ಮತ್ತು ಆತ್ಮಕಥನ ಊರು-ಕೇರಿ ಭಾಗ 1-2 ಪ್ರಕಟಗೊಂಡಿವೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗಕ್ಕಾಗಿ ?ಸಮಕಾಲೀನ ಕನ್ನಡ ಕವಿತೆಗಳು? ಭಾಗ-3 ಮತ್ತು ಭಾಗ-4 ನ್ನು ಸಂಪಾದಿಸಿಕೊಟ್ಟಿದ್ದಾರೆ.

ಸಿದ್ಧಲಿಂಗಯ್ಯ ಅವರ `ಊರು ಕೇರಿ' ಆತ್ಮಕಥೆ ಇಂಗ್ಲಿಷ್ ಹಾಗೂ ತಮಿಳಿಗೂ ಅನುವಾದಗೊಂಡಿದ್ದು ಇಂಗ್ಲಿಷ್ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿಯು ಪ್ರಕಟಿಸಿದೆ. ಸಿದ್ಧಲಿಂಗಯ್ಯನವರ ಹಲವಾರು ಕವಿತೆಗಳು ಇಂಗ್ಲಿಷ್, ಹಿಂದಿ, ತಮಿಳು, ಬಂಗಾಳಿ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ. ಸಿದ್ಧಲಿಂಗಯ್ಯ ಅವರು ಪುಟ್ಟಣ್ಣ ಕಣಗಾಲರು ನಿರ್ದೇಶಿಸಿದ `ಧರಣಿ ಮಂಡಲ ಮಧ್ಯದೊಳಗೆ' ಚಿತ್ರಕ್ಕೆ ಬರೆದ ಗೀತೆಗೆ 1983-84ರಲ್ಲಿ ರಾಜ್ಯಪ್ರಶಸ್ತಿ ಸಂದಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here