Friday 9th, May 2025
canara news

ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಅಧ್ಯಕ್ಷರಾಗಿ ಲ| ಮೋಹನ್ ಕೊಪ್ಪಲ್ ಕದ್ರಿ

Published On : 11 Jul 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಜು.10: ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ| ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.

ಕಾರ್ಯದರ್ಶಿ ಲ| ವಿನೂತನ್ ಕಲಿವೀರ್, ಕೋಶಾಧಿಕಾರಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆ ಆಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷ ಲ| ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ| ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ| ದೇವಾನಂದ್-ಟೇಮರ್ ಆಗಿ, ಲ| ಪ್ರದೀಪ್ ಆಳ್ವ-ಟೈಲ್ ಟ್ವಿಸ್ಟರ್ ಆಗಿ, ಲ| ಜೀತನ್ ಸಾಲಿಯಾನ್, ಸದಸ್ಯತ್ವ ಸಮಿತಿ ಅಧ್ಯಕ್ಷರಾಗಿ ಲ| ವೆಂಕಟೇಶ್ ಎಂ-ಸೇವಾಕಾರ್ಯ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿರುತ್ತಾರೆ.

ಆಡಳಿತ ಸಮಿತಿ ಸದಸ್ಯರಾಗಿ ಲ| ಕೆ.ಜೆ. ದೇವಾಡಿಗ, ಲ. ನವನೀತ ಶೆಟ್ಟಿ, ಲ| ಚಂದ್ರಹಾಸ ಶೆಟ್ಟಿ, ಲ| ದಿನಕರ ಸುವರ್ಣ, ಲ| ಸುಧಾಕರ ಆಳ್ವ, ಲ| ಬಾಲಕೃಷ್ಣ ಕೊಟ್ಟಾರಿ, ಲ| ನವೀನ್ ಸಿ.ಕೆ ಇವರು ಆಯ್ಕೆಯಾಗಿರುತ್ತಾರೆ .

ಲ| ಗೋಕುಲ್ ಕದ್ರಿ ಅಧ್ಯಕ್ಷತೆಯಲ್ಲಿ ಜರುಗಿದ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯದರ್ಶಿ ಲ| ಗೌರವ್ ಕದ್ರಿ 2020-21ನೇ ಸಾಲಿನ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ಕೋಶಾಧಿಕಾರಿ ಲ| ಧನರಾಜ್ ವಂದಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here