ಮುಂಬಯಿ (ಆರ್ಬಿಐ), ಆ.26: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ, ಸಾಮಾಜಿಕ ಚಿಂತಕ ಆನಂದ ಪೂಜಾರಿ (85.) ಇಂದು ಸಂಜೆ ಹಳೆಯಂಗಡಿ ಅಲ್ಲಿನ ನಿವಾಸದಲ್ಲಿ ನಿಧನರಾದರು.
ಮುಂಬಯಿ ಅಲ್ಲಿನ ಹೆಸರಾಂತ ಸಾಯಿಕೇರ್ ಸಂಸ್ಥೆಯ ಆಡಳಿತ ನಿರ್ದೇಶಕ, ಮದರ್ ಇಂಡಿಯಾ ನೈಟ್ ಹೈಸ್ಕೂಲ್ ಫೆÇೀರ್ಟ್ (ಮುಂಬಯಿ) ಇದರ ಅಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಲಹಾ ಸಮಿತಿ ಸದಸ್ಯ ಸುರೇಂದ್ರ ಎ.ಪೂಜಾರಿ ಸೇರಿದಂತೆ ಮೃತರು ಏಳು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ನಾಳೆ ಶುಕ್ರವಾರ (ಆ.27) ಮಧ್ಯಾಹ್ನ 12.30 ಗಂಟೆಗೆ ಅವರ ಹಳೆಯಂಗಡಿ ಅಲ್ಲಿನ ಸ್ವಗೃಹ ಜಾನಕಿ ನಿವಾಸ ಇಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ