Thursday 18th, April 2024
canara news

ವನಿತಾ ಎಸ್.ಶ್ರೀಯಾನ್ ಮುಲುಂಡ್ ನಿಧನ

Published On : 10 Dec 2021   |  Reported By : Rons Bantwal


ಮುಂಬಯಿ (ಆರ್‍ಬಿಐ), ಡಿ.10: ದೇವಾಡಿಗ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ, ಹಿರಿಯ ಮುತ್ಸದ್ಧಿ ಎಸ್.ಕೆ ಶ್ರೀಯಾನ್ ಇವರ ಧರ್ಮಪತ್ನಿ ವನಿತಾ ಎಸ್. ಶ್ರೀಯಾನ್ (82.) ಇಂದಿಲ್ಲಿ ಶುಕ್ರವಾರ ಮುಂಜಾನೆ ಘನ್ಸೋಲಿ ಇಲ್ಲಿನ ರಿಲಾಯನ್ಸ್ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸ್ವಸ್ಥತೆಯಿಂದ ನಿಧನರಾದರು.

ಮಂಗಳೂರು ಮೂಲತಃ ಮೃತರು ಮುಂಬಯಿ ಮುಲುಂಡ್ ಅಲ್ಲಿನ ಚೇರಿಸ್ ಸಿಟಿ ಆಫ್ ಜೊಯ್ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಮೃತರು ಎರಡು ಗಂಡು, ಎರಡು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊೈಲಿ, ಶ್ರೀ ಏಕನಾಥೇಶ್ವರಿ ದೇವಸ್ಥಾನ ಟ್ರಸ್ಟ್ ಬಾರ್ಕೂರು ಅಧ್ಯಕ್ಷ ಅಣ್ಣಯ್ಯ ಶೇರಿಗಾರ, ವಿಶ್ವಸ್ಥ ಸದಸ್ಯರಾದ ನಾರಾಯಣ ಎಂ.ದೇವಾಡಿಗ ದುಬಾಯಿ, ಮಾಜಿ ಅಧ್ಯಕ್ಷ ಧರ್ಮಪಾಲ್ ಯು. ದೇವಾಡಿಗ, ದೇವಾಡಿಗ ಸಂಘ ಉಡುಪಿ ಅಧ್ಯಕ್ಷ ರತ್ನಾಕರ ದೇವಾಡಿಗ ಸೇರಿದಂತೆ ಅನೇಕ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ವನಿತಾ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here