ಮುಂಬಯಿ (ಆರ್ಬಿಐ), ಫೆ.01: ಫೆಡರೇಶನ್ ಆಫ್ ಹೊಟೇಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಶನ್ಸ್ ಮಹಾರಾಷ್ಟ್ರ ನಿಯೋಗವು ಮಹಾರಾಷ್ಟ್ರ ಸರ್ಕಾರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಭೇಟಿ ನೀಡಿ ಹೊಟೇಲು ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮನವರಿಸಿ ಪರಿಹಾರ ಕೋರಿ ಮನವಿ ಸಲ್ಲಿಸಿತು.
ರಾಜ್ಯ ಸರ್ಕಾರದ ಅಧಿಕೃತ ಕಚೇರಿ ಮಂತ್ರಾಲಯದಲ್ಲಿ ಫೆಡರೇಶನ್ ಅಧ್ಯಕ್ಷ ಡಾ| ವಿರಾರ್ ಶಂಕರ್ ಬಿ. ಶೆಟ್ಟಿ, ಹಿರಿಯ ಉಪಾಧ್ಯಕ್ಷ ಶ್ಯಾಮ್ ಎನ್.ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಸಿ.ಸಾಲಿಯಾನ್, ಸಲಹಾಕಾರ ಅಧ್ಯಕ್ಷ ಕಳತ್ತೂರು ವಿಶ್ವನಾಥ ಶೆಟ್ಟಿ ಹಾಜರಿದ್ದು ಮನವಿ ಸಲ್ಲಿಸಿದರು.