(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ (ಆರ್ಬಿಐ), ಫೆ.24: ಉತ್ತರ ಮುಂಬಯಿ ಸಂಸದ ಗೋಪಾಲ ಸಿ.ಶೆಟ್ಟಿ ಅವರು ರೈಲ್ವೆ ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಲು ಮತ್ತು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಚರ್ಚ್ಗೇಟ್ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಮುಂಬಯಿ ರೈಲ್ವೆ ಅಭಿವೃದ್ಧಿ ನಿಗಮದ ನಿರ್ದೇಶಕ ಮತ್ತು ಅಧ್ಯಕ್ಷ ರವಿ ಅಗರ್ವಾಲ್ ಅವರೊಂದಿಗೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕ ವಿಲಾಸ್ ವಾಡೇಕರ್, ಮುಂಬಯಿ ಬಿಜೆಪಿ ಕಾರ್ಯದರ್ಶಿ ಯೂನಸ್ ಖಾನ್, ಕೈಲಾಶ್ ವರ್ಮಾ, ಬಿಜೆಪಿ ರೈಲು ಬಳಕೆದಾರರ ಕೋಶದ ಸಂಚಾಲಕರು ಮತ್ತಿತರರು ಉಪಸ್ಥಿತರಿದ್ದರು.