Wednesday 24th, April 2024
canara news

ಜು.23; ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಮಹಾರಾಷ್ಟ್ರ ಘಟಕದಿಂದ

Published On : 16 Jul 2022   |  Reported By : Rons Bantwal


`ಜಾನಪದ ಕಲೆಯ ಬೆಳವಣಿಗೆ, ಉತ್ತರದಲ್ಲಿ-ದಕ್ಷಿಣದಲ್ಲಿ' ವಿಷಯದ ಸಂವಾದ

ಮುಂಬಯಿ, ಜು.13: ಕರ್ನಾಟಕ ಜಾನಪದ ಕಲೆಯನ್ನು ಉಳಿಸಿ, ಬೆಳೆಸಿ ಅದನ್ನು ಇಂದಿನ ಮತ್ತು ಮುಂದಿನ ಜನಾಂಗಕ್ಕೆ ತಿಳಿಯ ಪಡಿಸಿ ಭಾವೀ ಜನಾಂಗಕ್ಕೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ಮಹಾರಾಷ್ಟ್ರ ಘಟಕವು ಇದೇ ಜು.23ನೇ ಶನಿವಾರ ಸಂಜೆ 3.00 ಗಂಟೆಯಿಂದ ಬಂಟರ ಸಂಘ ಮುಂಬಯಿ ಇದರ ಅನೇಕ್ಸ್ ಕಟ್ಟಡದ ಎರಡನೇ ಮಹಡಿಯಲ್ಲಿನ ಶ್ರೀಮತಿ ರಂಜನಿ ಸುಧಾಕರ ಹೆಗ್ಡೆ ಸಮಾಜ ಕಲ್ಯಾಣ ಸಭಾಭವನದಲ್ಲಿ ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಮಹಾರಾಷ್ಟ್ರ ಘಟಕ ಇದರ ಅಧ್ಯಕ್ಷ ಡಾ| ಆರ್.ಕೆ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಮುಂಬಯಿ ಮಹಾನಗರದಲ್ಲಿನ ಜನತೆಗೆ `ಜಾನಪದ ಕಲೆಯ ಬೆಳವಣಿಗೆ, ಉತ್ತರದಲ್ಲಿ-ದಕ್ಷಿಣದಲ್ಲಿ' ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ಆಯೋಜಿಸಿದೆ.

      

Dr. R.K Shetty                     Shrinivas P.Saphalya                           Lalita P.Angady

ಘಟಕದ ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಶ್ರೀನಿವಾಸ ಸಾಫಲ್ಯ ಇವರು `ಜಾನಪದ ಕಲೆಯ ದಕ್ಷಿಣ ಕನ್ನಡದ ನಡಿಗೆ' ಬಗ್ಗೆ ಮತ್ತು ಹಿರಿಯ ಲೇಖಕಿ ಲಲಿತ ಅಂಗಡಿ ಇವರು `ಉತ್ತರ ಕನ್ನಡದಲ್ಲಿ ಬೆಳೆಯುತ್ತಿರುವ ಜಾನಪದ ಕಲೆ' ಬಗ್ಗೆ ಚಿಂತನ-ಮಂಥನದೊಂದಿಗೆ ಉಪನ್ಯಾಸ ನೀಡಲಿದ್ದಾರೆ. ಸಂವಾದ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಪ್ರಶ್ನೆಗಳಿಗೂ ಅವಕಾಶವಿದ್ದು, ಆಯೋಜಕರು ಸೂಕ್ತ ಉತ್ತರವನ್ನು ನೀಡಲಿರುವರು. ಈ ಕಾರ್ಯಕ್ರಮದ ಸಮನ್ವಯತೆಯನ್ನು ಪರಿಷತ್ತ್‍ನ ಗೌ| ಪ್ರ| ಕಾರ್ಯದರ್ಶಿ ಅಶೋಕ ಪಕ್ಕಳ ಅವರು ನಡೆಸಿ ಕೊಡಲಿದ್ದಾರೆ.

ಸಂವಾದ ಕಾರ್ಯಕ್ರಮದ ಮಧ್ಯೆ ಸಾಂಸ್ಕೃತಿಕ `ಜಾನಪದ ಗೀತಾ ಗಾಯನ ಕಾರ್ಯಕ್ರಮ' ಹಮ್ಮಿಕೊಳ್ಳಲಾಗಿ ದ್ದು ಸ್ವರ್ಧಾರೂಪವಾಗಿರದೆ ಮನೋರಂಜನಾರ್ಥವಾಗಿ ಸಮೂಹಗೀತೆ ಮತ್ತು ಏಕವ್ಯಕ್ತಿ ಗೀತೆಯನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸಿದ ಕಲಾವಿದರಿಗೆ ಸೂಕ್ತ ಪೆÇ್ರೀತ್ಸಾಹಕ ಗೌರವ ಬಹುಮಾನಗಳನ್ನು ನೀಡಿ ಅಭಿನಂದಿಸಲಾಗುವುದು .

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಛಿಸುವವರು ಶುದ್ಧ ಜಾನಪದ ಗೀತೆಯೆನ್ನೇ ಹಾಡುವಂತೆ ಮತ್ತು ತಂಡದಲ್ಲಿ ಕನಿಷ್ಠ ನಾಲ್ಕು ಗರಿಷ್ಠ ಎಂಟು ಸದಸ್ಯರಿವಂತೆ , ಉಡುಗೆ ಸಾಂಪ್ರದಾಯಕವಾಗಿರುವಂತೆ , ಗೀತೆಯನ್ನು ಹಾಡಲಿಚ್ಚಿಸುವವರು ತಮ್ಮ ಹೆಸರನ್ನು ಕಾರ್ಯಕ್ರಮಕ್ಕಿಂತ ಬಹಳಷ್ಟು ಮುಂಚಿತವಾಗಿಯೇ ತಿಳಿಸುವಂತೆ , ಸಮಯಕ್ಕೆ ಸರಿಯಾಗಿ ಹಾಜರಿರುವಂತೆ ನಿಯಮವನ್ನು ಹಾಕಲಾಗಿದ್ದು ಈ ನಿಯಮಗಳನ್ನು ಪಾಲಿಸುವಂತೆ ಭಾಗವಹಿಸಲಿಚ್ಛಿಸುವ ಸಂಘ ಸಂಸ್ಥೆಗಳ ಸದಸ್ಯರಿಗೆ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ. ಜಾನಪದ ಗೀತೆಯನ್ನು ಹಾಡಲು ಗರಿಷ್ಠ 6 ನಿಮಿಷದ ಕಾಲಮಿತಿಯನ್ನು ನಿರ್ಧರಿಸಲಾಗಿದೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು, ಕಲಾವಿದರು, ತುಳು ಕನ್ನಡಿಗರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ವತಿಯಿಂದ ಉಪಾದ್ಯಕ್ಷ ಡಾ| ಸುರೇಂದ್ರಕುಮಾರ್ ಹೆಗ್ಡೆ, ಗೌ| ಪ್ರ| ಕಾರ್ಯದರ್ಶಿ ಅಶೋಕ್ ಪಕ್ಕಳ (9323822352), ಗೌ ಕೋಶಾಧಿಕಾರಿ ಗಣೇಶ್ ನಾಯ್ಕ್, ಜತೆ ಕಾರ್ಯದರ್ಶಿ ಪದ್ಮನಾಭ ಸಸಿಹಿತ್ಲು (9987959750), ಜತೆ ಕೋಶಾಧಿಕಾರಿ ಕುಸುಮ ಪೂಜಾರಿ, ಮಹಿಳಾಧ್ಯಕ್ಷೆ ಅನಿತಾ ಶೆಟ್ಟಿ ಮತ್ತು ಕಾರ್ಯಕ್ರಮದ ಸಂಪೂರ್ಣ ಪ್ರಾಯೋಜಕರಾದ ಶ್ರೀನಿವಾಸ ಸಾಫಲ್ಯ (9820370090) ಇವರು ವಿನಂತಿಸಿದ್ದಾರೆ. ಕಾರ್ಯಕ್ರಮದ ನಂತರ ಲಘ ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here