Friday 26th, April 2024
canara news

ಐಲೇಸಾ ಇ-ಪದ ಪಂತ ಸ್ಪರ್ಧೆ ; ಪ್ರಕಾಶ್ ಪಾವಂಜೆ `ಐ ಲೇಸಾ ಐಸಿರ' `ಐ ಲೇಸಾ ಐಸಿರಿ' ಆಗಿ ಕು| ಶೃದ್ಧಾ ಬಂಗೇರ ಆಯ್ಕೆ

Published On : 27 Oct 2022   |  Reported By : Rons Bantwal


ಮುಂಬಯಿ (ಆರ್‍ಬಿಐ), ಅ.27: ಐಲೇಸಾ-ದಿ ವಾಯ್ಸ್ ಆಫ್ ಓಷನ್ (ರಿ). ಡಿಜಿಟಲ್ ಸಂಸ್ಥೆ ತನ್ನ ದ್ವಿತೀಯ ಹುಟ್ಟುಹಬ್ಬದ ಪ್ರಯುಕ್ತ ನಡೆಸಿದ ಐಲೇಸಾ ಇ-ಪದ ಪಂತ ಸ್ಪರ್ಧೆಯಲ್ಲಿ ಬೆಂಗಳೂರುನ ಪ್ರಕಾಶ್ ಪಾವಂಜೆ ಮತ್ತು ಮುಂಬಯಿಯ ಕು| ಶ್ರದ್ಧಾ ಬಂಗೇರಾ ಆಯ್ಕೆಯಾಗಿದ್ದಾರೆ. ಸ್ಪರ್ಧಾ ಬಹುಮಾನ ರೂಪಾಯಿ 10,000/- ನಗದು ಮತ್ತು ಐಲೇಸಾ ಐಸಿರಿ ಮತ್ತು ಐಲೇಸಾ ಐಸಿರ ಸ್ಮರಣಿಕೆ ಹೊಂದಿತ್ತು.

ಕನ್ನಡ ಸಿನಿಮಾದ ಪ್ರಸಿದ್ಧ ಗೀತೆ ರಚನೆಕಾರ ಕೆ.ಕಲ್ಯಾಣ್, ಮುಂಬಯಿಯಲ್ಲಿನ ಹಿರಿಯ ಸಂಗೀತ ನಿರ್ದೇಶಕ ಪದ್ಮನಾಭ ಸಸಿಹಿತ್ಲು (ಕಲಾ ಸೌರಭ) ಮತ್ತು ಶ್ರೇಷ್ಠ ರಂಗನಟ ಅವಿನಾಶ್ ಕಾಮತ್, ಮಂಗಳೂರುನ ಹೆಸರಾಂತ ಸಂಗೀತಗಾರ ಸದಾಶಿವದಾಸ್ ಪಾಂಡೇಶ್ವರ್, ದುಬೈಯ ಗಾಯಕ ನವೀದ್ ಮಾಗುಂಡಿ ಇವರನ್ನೊಳಗೊಂಡ ಆಯ್ಕೆ ಸಮಿತಿ ವಿಜೇತರ ಆಯ್ಕೆ ಮಾಡಿತು. ವಿಶೇಷ ಧ್ವನಿ ಮತ್ತು ಪ್ರಸ್ತುತಿಗಾಗಿ ಹುಬ್ಬಳಿಯ ಕನ್ನಡ ಗಾಯಕಿ ಡಾ| ರಂಜನಾ ರಾನಡೆ ಮತ್ತು ಚೆನ್ನೈನ ಡಾ| ಪಲ್ಲವಿ ಶ್ಯಾಮ್‍ಸುಂದರ್ ಅವರು `ಐಲೇಸಾ ವಿಶೇಷ ಗಾಯಕಿ' ಗೌರವಕ್ಕೆ ಪಾತ್ರರಾದರು.

   

Prakash Pavanje                                              Shrudha Bangera

ಸ್ಪರ್ಧೆಯಲ್ಲಿ ಅತ್ಯುತ್ತಮವಾಗಿ ಹಾಡಿದ ಹನ್ನೆರಡು ಗಾಯಕ ಗಾಯಕಿಯರಲ್ಲಿ ಕ್ರಮವಾಗಿ ಶ್ರೀನಿವಾಸ್ ಅಂಗರಾಕೋಡಿ ಬೆಂಗಳೂರು, ಕು| ಶೀಲಾ ಪಡೀಲ್ ಮಂಗಳೂರು, ಕು| ಪೂರ್ಣಿಮಾ ಬಂಟ್ವಾಳ, ಪ್ರತೀಕ್ ರವೀಂದ್ರ ಜತನ್ ಪುಣೆ, ಜಯಲಕ್ಷಿ ್ಮ ಪ್ರಸಾದ್ ಶೆಟ್ಟಿ ಮುಂಬಯಿ, ಕು| ಶ್ವೇತಾ ಹೆಬ್ಬಾರ್ ಕುಂಬ್ಳೆ, ಕು| ಗ್ರಿಶ್ಮಾ ಕಟೀಲ್, ಅಕ್ಷತಾ ಪ್ರವೀಣ್ ಶೆಟ್ಟಿ ಸಿಡ್ನಿ, ಕು| ಕೀರ್ತಿ ಹರೀಶ್ ಶೆಟ್ಟಿ ಥಾಣೆ ಮುಂಬೈ, ಶ್ರೀವಲ್ಲಿ ರೈ ಮಾರ್ಟೆಲ್ ಫೆÇ್ಲೀರಿಡಾ ಸುಜಾತ ರೈ ಬದಿಯಡ್ಕ, ಸನತ್ ಕೆ.ಎಂ ಇವರು `ಐಲೇಸಾದ ಭವಿಷ್ಯದ ಹಾಡುಗಾರರು' ಗೌರವಕ್ಕೆ ಪಾತ್ರರಾದರು. ಮುಂದಿನ ಐಲೇಸಾದ ಹಾಡುಗಳನ್ನು ಅವರ ಧ್ವನಿಯಲ್ಲಿ ಹಾಡಿಸಲು ಐಲೇಸಾ ಆಶಯ ವ್ಯಕ್ತ ಪಡಿಸಿದೆ .

ಮುಖ್ಯ ಅತಿಥಿüಯಾಗಿದ್ದ ಕೆ.ಕಲ್ಯಾಣ್ ಮಾತನಾಡಿ ಆಯ್ಕೆ ಅನ್ನುವುದು ಒಂದು ಪ್ರಕ್ರಿಯೆ ಅಷ್ಟೆ, ತುಳು ಭಾಷೆ ಬರದೇ ಇರುವುದರಿಂದ ಅವರ ಎಲ್ಲರ ಧ್ವನಿಯ ಬಗ್ಗೆ ಹೃದಯವಿತ್ತು ಕೇಳುವುದು ಸಾಧ್ಯವಾಯ್ತು. ಎಲ್ಲರೂ ತುಂಬಾ ಆಸ್ಥೆಯಿಂದ ಸಂಗೀತವನ್ನು ಪ್ರೀತಿಸಿ ಹಾಡಿದ್ದಾರೆ. ಹಾಗಾಗಿ ಈ ಎಲ್ಲ ಹದಿನಾಲ್ಕು ಮಂದಿಯೂ ಭವಿಷ್ಯದ ಹಾಡುಗಾರರಾಗಿ ಹೊರಹೊಮ್ಮಲಿದ್ದಾರೆ ಮತ್ತು ನಮ್ಮ ಮುಂದಿನ ಯೋಜನೆಗಳಲ್ಲಿ ಇವರ ಧ್ವನಿ ನಮ್ಮ ಗಮನದಲ್ಲಿ ಇರುತ್ತದೆ ಎಂದು ಬೆನ್ನುತಟ್ಟಿದರು .

ಪದ್ಮನಾಭ ಸಸಿಹಿತ್ಲು ಮಾತನಾಡಿ ಸಂಗೀತ ನಮ್ಮ ಎಲ್ಲ ನೋವುಗಳನ್ನು ಮರೆಯಲು ದಿವ್ಯ ಔಷಧ, ಅದು ಜೀವನವನ್ನು ಸರಾಗ ಮಾಡುತ್ತದೆ, ನನ್ನ ಶಿಷ್ಯರು ಅನೇಕರು ಈ ಸ್ಪರ್ಧೆಯಲ್ಲಿ ಭಾಗವಸಿದ್ದು ನನಗೆ ಖುಷಿ ಕೊಟ್ಟಿದೆ, ನಾನು ಸ್ಪರ್ಧೆಯ ಒಬ್ಬ ತೀರ್ಪುಗಾರ ಅನ್ನುವುದು ಕೊನೆಯವರೆಗೂ ಗೌಪ್ಯವಾಗಿ ಇಟ್ಟಿದ್ದೆ. ಸ್ಪರ್ಧೆಯಲ್ಲಿ ಗೆಲ್ಲುವುದಕ್ಕಿಂತಲೂ ಭಾಗವಹಿಸುವಿಕೆಯ ಹುಮ್ಮಸ್ಸಿಗೆ ಅವರಿಗೆ ಅಭಿನಂದನೆಗಳು ಮುಂದೆಯೂ ಇಂತಹ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಆಶಿಸಿದರು .

ಖ್ಯಾತ ರಂಗಭೂಮಿ ನಟ ಅವಿನಾಶ್ ಕಾಮತ ಮಾತನಾಡಿ ನಿರಂತರ ಸಂಗೀತದ ಸಂಪರ್ಕ ಇರುವುದರಿಂದ ನನ್ನನ್ನು ಬಹುಶ: ತೀರ್ಪುಗಾರನಾಗಿ ಆಯ್ಕೆ ಮಾಡಿರಬಹುದು. ಸಂಗೀತ ಬದುಕಿಗೆ ಒಂದು ಲಯ ಕೊಡುತ್ತದೆ ಹಾಗಾಗಿ ಸಂಗೀತ ಕಲಿಯುವ ಅವಕಾಶವನ್ನು ಎಂದೂ ಕಳೆದು ಕೊಳ್ಳಬೇಡಿ ಎಂದು ತನ್ನ ಬಾಲ್ಯದ ನೆನಪಲ್ಲಿ ನಾಸಿರುದ್ದೀನ್ ಶ್ಹಾ ಮತ್ತು ಓಂಪುರಿ ಅವರು ತಾವು ಸಂಗೀತ ಕಲಿಯದಿರುವುದರ ಹಿಂದಿನ ಪಶ್ಚತ್ತಾಪವನ್ನು ತಮ್ಮ ತಂದೆಯವರಲ್ಲಿ ಹಂಚಿಕೊಂಡದ್ದನ್ನು ಸ್ಮರಿಸಿದರು.

ಶರತ್ರ ಪಡುಪಳ್ಳಿ ನೈಜಿರೀಯಾ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ವಿವೇಕ್ ಮಂಡಕರೆ ಪ್ರಸ್ತಾವನೆಗೈದರು. ಐಲೇಸಾದ ರೂವಾರಿ ದಿವಂಗತ ವಿದ್ಯಾರಣ್ಯ ಅವರನ್ನು ಸುಧಾಕರ್ ಸ್ಮರಿಸಿದರು. ತುಳು-ಕನ್ನಡ ಕವಿ ಶಾಂತರಾಮ ಶೆಟ್ಟಿ ತೀರ್ಪುಗಾರರನ್ನು ಪರಿಚಯಿಸಿದರು. ಸುರೇಂದ್ರ ಮಾರ್ನಾಡ್ ಸ್ಪರ್ಧಿಗಳ ಉತ್ಸಾಹಕ್ಕೆ ಅಭಿನಂದನೆ ಸಲ್ಲಿಸಿದರು. ಗೋಪಾಲ್ ಪಟ್ಟೆ ತಾಂತ್ರಿಕ ನಿರ್ವಹಣೆ ಮಾಡಿದರು. ಶಿವು ಸಾಲಿಯಾನ್ ಕಾರ್ಯಕ್ರಮ ನಿರ್ವಹಿಸಿದರು. ವಿಶ್ವನಾಥ್ ಪಳ್ಳಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸುಬ್ರಾಯ ಚೊಕ್ಕಾಡಿ ಅವರ ವಯೋ ಸಮ್ಮಾನ್ ಗೌರವದ ತುಣುಕುಗಳನ್ನು ಪ್ರದರ್ಶಿಸ ಲಾಯಿತು. ರಮೇಶ್ಚಂದ್ರ ಅವರು ನವೀದ್ ಕಲ್ಯಾಣ್ ಅವರ ರಚನೆಗಳನ್ನು ಹಾಡಿ ರಂಜಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here