ಮುಂಬಯಿ (ಆರ್ಬಿಐ), ಡಿ.22: ಜಾರ್ಖಂಡ್ ರಾಜ್ಯದ ಪ್ರಸಿದ್ಧ ಜೈನ ಕ್ಷೇತ್ರವಾದ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ಕೇಂದ್ರವೆಂದು ಅಲ್ಲಿನ ರಾಜ್ಯಸರ್ಕಾರವು ಪರಿಗಣಿಸಿರುವುದನ್ನು ಕೈಬಿಡಬೇಕೆಂದು ರಾಜ್ಯಸಭಾ ಸಂಸದ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆ ಅವರು ಇಂದಿಲ್ಲಿ ನವದೆಹಲಿಯಲ್ಲಿ ಕೇಂದ್ರದ ಸಾಂಸ್ಕøತಿಕ ಮತ್ತು ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರನ್ನು ಭೇಟಿಯಾಗಿ ಸಮ್ಮೇದ ಶಿಖರ್ಜಿ ಧಾರ್ಮಿಕ ಕೇಂದ್ರವಾಗಿಯೇ ಸಂರಕ್ಷಿಸುವಂತೆ ಒತ್ತಾಯಿಸಿದರು.
ಇದಕ್ಕೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಮಾನ್ಯ ಸಚಿವರು, ನಾನು ಈಗಾಗಲೇ ಲೋಕ ಸಭೆಯಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವುದಾಗಿ ಮತ್ತು ತಮ್ಮ ಕೋರಿಕೆಯ ಮೇರೆಗೆ ತಕ್ಷಣ ಜಾರ್ಖಂಡ್ನ ಮಾನ್ಯ ಮುಖ್ಯಮಂತ್ರಿ ಅವರಿಗೆ ಮತ್ತೊಂದು ಪತ್ರವನ್ನು ಬರೆದು ಸಮ್ಮೇದ ಶಿಖರ್ಜಿಯ ಪಾವಿತ್ರ್ಯತೆಯನ್ನು ಉಳಿಸುವಂತೆ ಮತ್ತು ಪ್ರವಾಸಿ ತಾಣ ಎಂಬುದನ್ನು ಕೈಬಿಡಬೇಕೆಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.