Sunday 3rd, December 2023
canara news

ಬಿಕರ್ಣಕಟ್ಟೆ ಬಾಲಯೇಸು ಪುಣ್ಯಕ್ಷೇತ್ರಕ್ಕೆ ಸಿದ್ದರಾಮಯ್ಯ ಭೇಟಿ

Published On : 07 Jan 2023


ಮುಂಬಯಿ (ಆರ್‍ಬಿಐ), ಜ.05: ಮಂಗಳೂರು ಬಿಕರ್ಣಕಟ್ಟೆ ಅಲ್ಲಿನ ಬಾಲಯೇಸುವಿನ ಪುಣ್ಯಕ್ಷೇತ್ರಕ್ಕೆ ಇಂದಿಲ್ಲಿ ಗುರುವಾರ ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯನ್ನೀಡಿ ಬಾಲಯೇಸುವಿನ ಆಶೀರ್ವಾದಗಳನ್ನು ಪಡೆದುಕೊಂಡರು.

ಪುಣ್ಯಕ್ಷೇತ್ರವು ಆಚರಿಸುತ್ತಿರುವ 2023ನೇ ವಾರ್ಷಿಕ ಉತ್ಸವದ ಶುಭಾವಸರದ ಪ್ರಥಮ ದಿನದ ಸಂದರ್ಭ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕ್ಷೇತ್ರದ ವಂ| ಫಾ| ಚಾರ್ಲ್ಸ್ ಸೆರಾವೊ ಸ್ವಾಗತಿಸಿದರು. ಕ್ಷೇತ್ರದ ನಿರ್ದೇಶಕ ವಂ| ಫಾ| ರೋವೆಲ್ ಡಿಸೋಜಾ ಪ್ರಾಥಿರ್üಸಿ ಹರಸಿದರು.

ಈ ಸಂದರ್ಭ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ ಖಾದರ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಎಂಎಲ್‍ಸಿ ಐವನ್ ಡಿಸೋಜಾ ಮಾಜಿ ಶಾಸಕರಾದ ಜೆ.ಆರ್. ಲೋಬೊ. ಬಿ.ಎ ಮೊಯ್ಧೀನ್ ಬಾವಾ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ ಎ ಗಫೂರ್, ಮಂಗಳೂರುನ ಮಾಜಿ ಮೇಯರ್ ಕವಿತಾ ಸನಿಲ್ ಮತ್ತಿತರ ಗಣ್ಯರು ಹಾಜರಿದ್ದರು.




More News

ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ  (ಉತ್ಹಾನ ದ್ವಾದಶಿ ) ಆಚರಣೆ
ಗೋಕುಲದಲ್ಲಿ ಸಂಭ್ರಮದ ತುಳಸೀ ವಿವಾಹ (ಉತ್ಹಾನ ದ್ವಾದಶಿ ) ಆಚರಣೆ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ
ಸಾಹಿತಿ, ನಿವೃತ್ತ ಶಿಕ್ಷಕಿ ಮೇರಿ ಬಿ.ಪಿಂಟೋ ನಿಧನ

Comment Here