Saturday 20th, April 2024
canara news

ದಾದ್ರಾ ನಗರ ಹವೇಲಿ ನಗರದ ಸಿಲ್ವಾಸ ಪಾಲಿಕೆಯ ಮೇಯರ್ ಆಗಿ ರಜನಿ ಜಿ.ಶೆಟ್ಟಿ ಆಯ್ಕೆ

Published On : 27 May 2023   |  Reported By : Rons Bantwal


ಮುಂಬಯಿ, (ಆರ್‍ಬಿಐ) ಮೇ.26: ಗುಜರಾತ್ ರಾಜ್ಯದÀ ದಾದ್ರಾ ಮತ್ತು ನಗರ ಹವೇಲಿ ವ್ಯಾಪ್ತಿಯ ಸಿಲ್ವಾಸ ನಗರಪಾಲಿಕೆಯ ಅಧ್ಯಕ್ಷೆ (ಮೇಯರ್) ಆಗಿ ತುಳು ಕನ್ನಡತಿ ರಜನಿ ಗೋವಿಂದ ಶೆಟ್ಟಿ ಸರ್ವಾನುಮತದಿಂದ ಚುನಾಯಿತರಾಗಿದ್ದಾರೆ. ಚುನಾವಣಧಿಕಾರಿ ಕಲೆಕ್ಟರ್ ಭಾನುಪ್ರಭ, ಬಿಜೆಪಿ ಅಧ್ಯಕ್ಷ ದೀಪೇಶ್ ತಂದೆಲ್, ಮಾಜಿ ಮೇಯರ್ ರಾಕೇಶ್ ಚವಾಣ್, ಮಾಜಿ ಉಪ ಮೇಯರ್ ಅಜಯ್ ದೇಸಾಯಿ ಇವರ ಸಮ್ಮಖದಲ್ಲಿ ಆಯ್ಕೆ ಪ್ರಕ್ರಿಯೆ ನೇರವೇರಿತು.

ದಕ್ಷಿಣ ಕನ್ನಡ ಮಂಗಳೂರು ಮಣ್ಣುಗುಡ್ಡೆ ಮೂಲತಃ ದಿ| ನಾರಾಯಣ ತಿಮ್ಮಪ್ಪ ಶೆಟ್ಟಿ ಅವರ ಸುಪುತ್ರಿ, ಕಾರ್ಕಳ ತಾಲೂಕಿನ ಕಾಂತವರ ಹೊಸಮನೆ ಹಾಗೂ ನಾಮಾಂಕಿತ ಸಮಾಜ ಸೇವಕ ಗೋವಿಂದ ಶೆಟ್ಟಿ ಅವರ ಪತ್ನಿ, ಮಕ್ಕಳಾದ ತರುಣ್ ಮತ್ತು ಪುಣ್ಯ ಅವರೊಂದಿಗೆ ಸುಖ ಸಂಸಾರ ನಡೆಸುತ್ತಿರುವ ಇವರು ಸುಮಾರು ಕಳೆದ ಐದು ವರ್ಷಗಳಿಂದ ಇಲ್ಲಿನ ಕಾನ್‍ವೆಲ್ ಪಂಚಾಯತ್‍ನಲ್ಲಿ ಪಂಚಾಯತಿ ಅಧ್ಯಕ್ಷೆ (ಸರ್‍ಪಂಚ್) ಆಗಿದ್ದು, ಕಳೆದ ಎರಡುವರೆ ವರ್ಷಗಳಿಂದ ದಾದ್ರಾ ನಗರ ಹವೇಲಿ ಮಹಾ ನಗರ ಪಾಲಿಕೆಯ ಮೇಲ್ವಿಚಾರಕಿಯಾಗಿ ಆಗಿ ಕಾರ್ಯನಿರ್ವಾಹಿಸುತ್ತಿದ್ದರು. ತನ್ನ ಕಾರ್ಯಾವದಿಯಲ್ಲಿ ದಾದ್ರ ಹವೇಲಿ ಮತ್ತು ಸಿಲ್ವಾಸ ಪರಿಸರದ ಅಭಿವೃದ್ಧಿಯಲ್ಲಿ ತಮ್ಮ ಮಹತ್ತರ ಸೇವೆಯನ್ನು ಸಲ್ಲಿಸಿದ ಹಿರಿತನ ರಜನಿ ಅವರಿಗೆ ಸಲ್ಲುತ್ತದೆ. ಸಿಲ್ವಾಸ ಮತ್ತು ವಾಪಿ ಕನ್ನಡ ಸಂಘ, ತುಳು ಐಸಿರಿ ಹಾಗೂ ಅನೇಕ ತುಳು ಕನ್ನಡ ಸಂಘಗಳಲ್ಲಿ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ರಜನಿ ಸ್ಥಾನಿಯವಾಗಿ ಗುರುತಿಸಿಕೊಂಡು, ತುಳು-ಕನ್ನಡಿಗರ ಸಮಸ್ಯೆಗಳಿಗೆ ತ್ವರಿತ ಗತಿಯಲ್ಲಿ ಸ್ಪಂದಿಸಿ ಎಲ್ಲರ ಅಭಿಮಾನಕ್ಕೆ ಮತ್ತು ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇದೀಗ ಮೇಯರ್ ಸ್ಥಾನವನ್ನು ಅಲಂಕರಿಸಿದ ಇವರಿಗೆ ತುಳು ಕನ್ನಡಿಗರು ಸೇರಿದಂತೆ ಸ್ಥಾನೀಯರಿಂದ ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here