Thursday 8th, May 2025
canara news

ಬಂಟರ ಸಂಘ ಸುರತ್ಕಲ್ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು ಆಯ್ಕೆ

Published On : 10 Jun 2023   |  Reported By : Rons Bantwal


ಮುಂಬಯಿ (ಆರ್‍ಬಿಐ), ಜೂ.08: ಬಂಟರ ಸಂಘ (ರಿ) ಸುರತ್ಕಲ್ ಇದರ 2023-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.

ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿ ಆಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿ ಆಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದರ್ಶಿ ಆಗಿ ಸುಧೀರ್ ಶೆಟ್ಟಿ ಸೂರಿಂಜೆ, ಸಂಘಟನಾ ಕಾರ್ಯದರ್ಶಿ ಆಗಿ ಪುಷ್ಪರಾಜ ಶೆಟ್ಟಿ ಮದ್ಯ, ಸಾಂಸ್ಕೃತಿಕ ಕಾರ್ಯದರ್ಶಿ ಆಗಿ ಜಯರಾಮ ಶೆಟ್ಟಿ ತಡಂಬೈಲ್, ಕ್ರೀಡಾ ಕಾರ್ಯದರ್ಶಿ ಆಗಿ ಶಿಶಿರ್ ಶೆಟ್ಟಿ ಪೆರ್ಮುದೆ ಆಯ್ಕೆಗೊಂಡರು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಾಳ ಜಗನ್ನಾಥ ಶೆಟ್ಟಿ, ಸುಧಾಕರ ಶೆಟ್ಟಿ ಚೇಳಾರ್, ಶ್ರೀಕಾಂತ್ ಶೆಟ್ಟಿ ಕಾಟಿಪಳ್ಳ, ಮಾಧವ ಶೆಟ್ಟಿ ತಡಂಬೈಲ್, ಶ್ರೀಕೃಷ್ಣ ಶೆಟ್ಟಿ ಕುತ್ತೆತ್ತೂರು, ಯೋಗೀಶ್ ಶೆಟ್ಟಿ ಕುಳಾಯಿ, ಹರೀಶ್ ಶೆಟ್ಟಿ ಇಡ್ಯಾ, ಸುಜಾತ ಶೆಟ್ಟಿ ಹೊಸಬೆಟ್ಟು, ವೇದಾವತಿ ಎನ್.ಶೆಟ್ಟಿ ಇಡ್ಯಾ, ಮೀರಾವಾಣಿ ಎಂ.ಶೆಟ್ಟಿ ಕಾಟಿಪಳ್ಳ ಆಯ್ಕೆಯಾದರು.

ಬಂಟರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾಗಿ ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ಕರ್ತವ್ಯ ನಿರ್ವಹಿಸಿದರು. ಯಶ್ ರಾಜ್ ಶೆಟ್ಟಿ, ಶ್ರೀಜಿತ್ ಶೆಟ್ಟಿ, ಸುಶಾನ್ ಶೆಟ್ಟಿ ಸಹಕರಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here