ಮುಂಬಯಿ, ಆ.11: ಉಡುಪಿ ಜಿಲ್ಲೆಯ ಕಲ್ಯಾಣ್ಫುರ ಮೂಡುತೋನ್ಸೆ ಇಲ್ಲಿನ ಬ್ರಹ್ಮಶ್ರೀ ಬೈದರ್ಕಳ ಪಂಚ ಧೂಮವತೀ ಗರಡಿ ಇದರ ಸರ್ವೋನ್ನತಿಗಾಗಿ ಸೇವಾನಿರತ ತೋನ್ಸೆ ಶ್ರೀ ಬ್ರಹ್ಮಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬಯಿ ಇದರ ಪಂಚಮ (5ನೇ) ವಾರ್ಷಿಕ ಮಹಾಸಭೆಯನ್ನು ಇದೇ ಬರುವ ಆ.20ನೇ ಭಾನುವಾರ ಸಾಂತಾಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದ ಸಭಾಗೃಹದಲ್ಲಿ ಬೆಳಿಗ್ಗೆ 10.00 ಗಂಟೆಗೆ ಟ್ರಸ್ಟ್ನ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಸಲಿದೆ ಎಂದು ಸೇವಾ ಟ್ರಸ್ಟ್ ಮುಂಬಯಿ ಇದರ ಪದಾಧಿಕಾರಿಗಳು ತಿಳಿಸಿದ್ದಾರೆ.
Nityanand D.Kotyan Sanjiva Poojary Raviraj Kalyanpur.
ಸಭೆಯಲ್ಲಿ ಗತಸಾಲಿನ ಮಹಾಸಭೆಯ ವರದಿ, ಕಾರ್ಯ ಚಟುವಟಿಕೆಗಳು, ವಾರ್ಷಿಕ ಲೆಕ್ಕಪತ್ರಗಳ ಮಂಡನೆ ಇತ್ಯಾದಿಗಳನ್ನು ನಡೆಸಲಾಗುವುದು ಎಂದು ಟ್ರಸ್ಟ್ನ ಗೌ| ಪ್ರ| ಕೋಶಾಧಿಕಾರಿ ರವಿರಾಜ್ ಕಲ್ಯಾಣ್ಫುರ್ ತಿಳಿಸಿದ್ದಾರೆ. ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರು, ಸಲಹಾದಾರರು, ಸದಸ್ಯರು ಹಾಜರಿರುವಂತೆ ಸೇವಾ ಟ್ರಸ್ಟ್ ಮುಂಬಯಿ ಇದರ ಗೌರವ ಪ್ರಧಾನ ಕಾರ್ಯದರ್ಶಿ ಸಂಜೀವ ಪೂಜಾರಿ ತೋನ್ಸೆ ಈ ಮೂಲಕ ವಿನಂತಿಸಿದ್ದಾರೆ.