Tuesday 23rd, April 2024
canara news

ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಲು ವೀರೇಂದ್ರ ಹೆಗ್ಗಡೆ ಕರೆ

Published On : 25 Dec 2016   |  Reported By : Rons Bantwal


ಉಜಿರೆ: ರಾಜ್ಯದಲ್ಲಿ ಎಲ್ಲಾ ಶ್ರದ್ಧಾ ಕೇಂದ್ರಗಳನ್ನು (ದೇವಸ್ಥಾನ, ಚರ್ಚ್, ಮಸೀದಿ ಹಾಗೂ ಭೂತಾಲಯ) 2017ರ ಜನವರಿ 13ರೊಳಗೆ ಒಳಗಿನ ಹಾಗೂ ಹೊರಗಿನ ಪರಿಸರವನ್ನು ಶುಚಿಗೊಳಿಸಿ ಪಾವಿತ್ರ್ಯ ಕಾಪಾಡಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕರೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ನೇತ್ರಾವತಿ ಸ್ನಾನಘಟ್ಟದಲ್ಲಿ ಶನಿವಾರ ವೀಕ್ಷಣೆ ಬಳಿಕ ತಮ್ಮ ಬೀಡಿನಲ್ಲಿ (ನಿವಾಸ) ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಶ್ರದ್ಧಾ ಕೇಂದ್ರಗಳಲ್ಲಿ ಸ್ವಚ್ಛತೆ ಪಾಲನೆಯೊಂದಿಗೆ ಪಾವಿತ್ರ್ಯ ರಕ್ಷಣೆ ಬಗ್ಯೆ ಭಕ್ತರಲ್ಲಿ ಜಾಗೃತಿ ಮೂಡಿಸಬೇಕು. ಅವರು ಶ್ರದ್ಧಾಕೇಂದ್ರಗಳಿಗೆ ಬರುವಾಗ ಮಾನಸಿಕವಾಗಿ ಶುಚಿತ್ವ ಕಾಪಾಡಲು ಸಿದ್ಧರಾಗಬೇಕು, ಬದ್ಧರಾಗಬೇಕು. ಶ್ರದ್ಧಾಕೇಂದ್ರಗಳ ಒಳಗೆ ಮದುವೆ ಮಾಡುವುದು, ಕುಂಕುಮ, ಅರಿಶಿನ, ಪ್ರಸಾದ ಹಾಕಿ ಹೋಗುವುದು ಸರಿಯಲ್ಲ. ಇದರಿಂದ ಪರಿಸರ ಹಾಳಾಗುವುದಲ್ಲದೆ ಮುಂದೆ ಅಲ್ಲಿಗೆ ಬರುವ ಭಕ್ತರಿಗೂ ತೊಂದರೆಯಾಗುತ್ತದೆ. ಅನಾರೋಗ್ಯಕರ ವಾತಾವರಣ ಉಂಟಾಗುತ್ತದೆ.

ಎಲ್ಲಾ ಕೇಂದ್ರಗಳಲ್ಲಿ ಶುಚಿತ್ವ ಕಾಪಾಡವ ಬಗ್ಯೆ ಅಲ್ಲಲ್ಲಿ ಫಲಕಗಳನ್ನು ಹಾಕಬೇಕು. ಸಾಕಷ್ಟು ಶೌಚಾಲಯಗಳನ್ನು ನಿರ್ಮಿಸಬೇಕು. ಕಸಕಡ್ಡಿ ಹಾಗೂ ತ್ಯಾಜ್ಯ ಬಿಸಾಡಲು ಸೂಕ್ತ ವ್ಯವಸ್ಥೆ ಮಾಡಬೇಕು. ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಶ್ರದ್ಧಾಕೇಂದ್ರಗಳಲ್ಲಿ ಮಡಿ ಅಂದರೆ ಅಸ್ಪøಶ್ಯತೆ ಅಲ್ಲ. ಪಾವಿತ್ರ್ಯ ರಕ್ಷಣೆಗೆ ಪರಿಶುದ್ಧರಾಗಿರುವುದು ಎಂದು ಅರ್ಥ. ಶ್ರದ್ಧಾಕೇಂದ್ರಗಳ ಒಳಗೆ ಮತ್ತು ಹೊರಗೆ ಸ್ವಚ್ಛತೆ ಕಾಪಾಡಿದರೆ ವಿಶೇಷ ಶಕ್ತಿ ಸಂಚಯವಾಗಿ ಸಾನ್ನಿಧ್ಯ ವೃದ್ಧಿಯಾಗುತ್ತದೆ. ಭಕ್ತರ ಅಭೀಷ್ಟಗಳು ನೆರವೇರುತ್ತವೆ ಎಂದು ಹೆಗ್ಗಡೆಯವರು ಅಭಿಪ್ರಾಯಪಟ್ಟರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿರುವ 18000 ಒಕ್ಕೂಟಗಳ ಮೂಲಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಅಭಿಯಾನ ಆಯೋಜಿಸಲಾಗಿದೆ. 2017ರ ಜನವರಿ 13ರೊಳಗೆ ಸ್ವಚ್ಛತಾ ಕಾರ್ಯ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಕಳೆದ 5 ದಿನಗಳಲ್ಲಿ ತಾನು ಕಾರ್ಕಳ, ಉಡುಪಿ, ಕುಂದಾಪುರ ಹಾಗೂ ಧಾರವಾಡದಲ್ಲಿ ಕೆಲವು ಶ್ರದ್ಧಾ ಕೇಂದ್ರಗಳಿಗೆ ಭೇಟಿ ನೀಡಿ ಮಾರ್ಗದರ್ಶನ ನೀಡಿರುವುದಾಗಿ ಹೆಗ್ಗಡೆಯವರು ತಿಳಿಸಿದರು. ಎಲ್ಲಾ ಕಡೆ ಉತ್ತಮ ಸ್ಪಂದನೆ ದೊರಕಿದೆ. ಕೊಂಚ ಜನ ಜಾಗೃತಿಯೂ ಮೂಡಿ ಬಂದಿದೆ ಎಂದರು. ಚರ್ಚ್ ಹಾಗೂ ಮಸೀದಿಗಳವರೂ ಈ ಬಗ್ಯೆ ಸಹಕಾರ ನೀಡುತ್ತಿದ್ದಾರೆ.

ಸರ್ಕಾರವನ್ನು ಸಂಪರ್ಕಿಸಿದಾಗ ಮುಜರಾಯಿ ಸಚಿವರು ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುವ ಬಗ್ಯೆ ಸದ್ಯದಲ್ಲಿಯೇ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ ಎಂದು ಅವರು ಹೇಳಿದರು. ಮಾಧಯಮಗಳು ಕೂಡಾ ಈ ಬಗ್ಯೆ ಸೂಕ್ತ ಸಹಕಾರ ನೀಡಬೇಕು ಎಂದು ಹೆಗ್ಗಡೆಯವರು ಕೋರಿದರು.

ಆಯಾ ಊರಿನ ಜನರು ಶ್ರದ್ಧಾ ಕೇಂದ್ರಗಳ ಸ್ವಚ್ಛತೆಯನ್ನು ಶ್ರಮದಾನದ ಮೂಲಕ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ಹೂತೋಟ, ವಾಹನ ತೊಳೆಯುವಾಗ ನೀರಿನ ಮಿತ ಬಳಕೆ ಮಾಡಬೇಕು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here