ಬಂಟ ಸಮಾಜದ ಸ್ಪಂದನೆಯೇ ನಮ್ಮ ಉದ್ದೇಶ : ಐಕಳ ಹರೀಶ್ ಶೆಟ್ಟಿ
ಮುಂಬಯಿ (ಆರ್ಬಿಐ), ಎ.09: ಬಂಟ ಸಮಾಜದಲ್ಲಿ ಅಸಹಾಯಕರಾಗಿರುವ ಸಮಾಜದವರನ್ನು ಗುರುತಿಸಿ ಆಥಿರ್üಕ ಸಹಾಯ, ವಸತಿ ನಿರ್ಮಾಣ, ವೈದ್ಯಕೀಯ ನೆರವು, ವಿದ್ಯಾಥಿರ್üಗಳಿಗೆ ವಿದ್ಯಾಥಿರ್ü ವೇತನ, ಹೆಣ್ಣು ಮಕ್ಕಳ ವಿವಾಹ ನೆರವು ಇತ್ಯಾದಿ ಸಹಾಯವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ನೀಡುತ್ತಾ ಬಂದಿದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಮಂಗಳೂರು ಇಲ್ಲಿನ ಬಂಟ್ಸ್ ಹಾಸ್ಟೆಲ್ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ಎಪ್ರಿಲ್ ತಿಂಗಳಲ್ಲಿ ಸುಮಾರು 15 ಲಕ್ಷ ರೂ ವರೆಗಿನ ಆಥಿರ್üಕ ನೆರವನ್ನು ಸಮಾಜ ಕಲ್ಯಾಣ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಐಕಳ ಹರೀಶ್ ಮಾತನಾಡಿದರು.
ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ದಾನಿಗಳಿಂದ ನೆರವನ್ನು ಪಡೆದು ಸಮಾಜ ಮುಖಿ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಯಾದ್ಯಂತ ಇರುವ ಬಡವರನ್ನು ಸರ್ವೇ ಮೂಲಕ ಗುರುತಿಸಲಾಗುತ್ತಿದೆ. ಮುಳಿಹುಲ್ಲಿನ ಮನೆ, ಪ್ಲಾಸ್ಟಿಕ್ಗಳನ್ನು ಹೊದಿಕೆಯನ್ನಾಗಿಸಿ ಗುಡಿಸಲಲ್ಲಿ ವಾಸಿಸುತ್ತಿರುವವರನ್ನು ಗುರುತಿಸಿ ಸಮಾಜ ಬಾಂಧವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಾಡುತ್ತಿದೆ. ಸಮಾಜದ ಕಣ್ಣೊರೆಸುವ ಪ್ರಮಾಣಿಕ ಪ್ರಯತ್ನಕ್ಕೆ ದಾನಿಗಳು ಕೈ ಜೋಡಿಸಿ ನೆರವು ನೀಡುತ್ತಿದ್ದಾರೆ ಎಂದು ಹರೀಶ್ ಶೆಟ್ಟಿ ತಿಳಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಕಾರ್ಯಕ್ರಮದ ಕುರಿತು ಮುಖ್ಯ ಅತಿಥಿüಗಳಾಗಿದ್ದ ಒಕ್ಕೂಟದ ಪೆÇೀಷಕ ಸದಸ್ಯ ಹಾಗೂ sಸಾಯಿ ರಾಧಾ ಸಮೂಹ ಸಂಸ್ಥೆಗಳ ಅಧ್ಯಕ್ಷ ರವಿ ಎಸ್.ಶೆಟ್ಟಿ ಮತ್ತು ಉದ್ಯಮಿ ಗಜಾನನ ಪೂಂಜ ಉಪಸ್ಥಿತರಿದ್ದು ಸಮಾರಂಭದಲ್ಲಿ ಅವರನ್ನು ಗೌರವಿಸಲಾಯಿತು.
ಹರೀಶ್ ಶೆಟ್ಟಿ ಅವರು ಒಕ್ಕೂಟದ ಅಧ್ಯಕ್ಷರಾದ ಬಳಿಕ ಒಕ್ಕೂಟದ ಚಿತ್ರಣವನ್ನೇ ಬದಲಾಯಿಸಿದ್ದಾರೆ. ಒಕ್ಕೂಟಕ್ಕೊಂದು ಹೊಸ ಕಾಯಕಲ್ಪ ನೀಡಿದ್ದಾರೆ. ಈ ವರೆಗೆ ನಾಲ್ಕು ಕೋಟಿ ರೂಪಾಯಿಗೂ ಮಿಕ್ಕಿದ ಆಥಿರ್üಕ ಸಹಾಯವನ್ನು ಫಲಾನುಭವಿಗಳಿಗೆ ವಿತರಿಸುವ ಕೆಲಸ ಮಾಡಿದ್ದಾರೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾರಂಭದಲ್ಲಿ 24 ಮಂದಿ ವೈದ್ಯಕೀಯಕ್ಕೆ 13 ಮಂದಿ ಮನೆ ನಿರ್ಮಾಣಕ್ಕೆ 17 ಮಂದಿ ಮದುವೆಗೆ ಫಲಾನುಭವಿಗಳು ನೆರವು ಪಡೆದರು.
ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಜೀವನ್ ಶೆಟ್ಟಿ ಮೂಲ್ಕಿ, ದೇವಪ್ಪ ಶೇಖ, ಲೋಕಯ ಶೆಟ್ಟಿ ಮುಂಚೂರು, ಪ್ರಕಾಶ್ ಶೆಟ್ಟಿ ಪಡುಬಿದ್ರೆ, ಸುದರ್ಶನ್ ಶೆಟ್ಟಿ ಪೆರ್ಮಂಕಿ, ಪ್ರದೀಪ್ ರೈ, ಈಶ್ವರ್ ಶೆಟ್ಟಿ ಚಿಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು. ಒಕ್ಕೂಟದ ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಕಾರ್ಯಕ್ರಮ ನಿರ್ವಹಿಸಿದರು. ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ ವಂದಿಸಿದರು.